Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:16 - ಕನ್ನಡ ಸಮಕಾಲಿಕ ಅನುವಾದ

16 “ ‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಯಾವನಾದರು ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದಕ್ಕೆ ಬಿತ್ತನೆಬೀಜ ಎಷ್ಟು ಬೇಕಾಗುತ್ತದೆ ಎಂಬುದರ ಆಧಾರದ ಮೇಲೆ ನೀವು ಅದರ ಬೆಲೆಯನ್ನು ನಿರ್ಣಯಿಸಬೇಕು. ಇಪ್ಪತ್ತು ಕಿಲೋಗ್ರಾಂ ಜವೆಗೋಧಿಯನ್ನು ಬಿತ್ತಬಹುದಾದಂಥ ಭೂಮಿಗೆ ಐವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾವನಾದರೂ ಪಿತ್ರಾರ್ಜಿತಭೂವಿುಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ನೀವು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಎರಡು ಕಂಡುಗ ಜವೆಗೋದಿಯ ಬೀಜವರಿಯುಳ್ಳ ಹೊಲವು ಐವತ್ತು ರೂಪಾಯಿ ಬಾಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಒಬ್ಬನು ತನ್ನ ಹೊಲಗಳಲ್ಲಿ ಒಂದು ಭಾಗವನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದರಲ್ಲಿ ಬಿತ್ತುವುದಕ್ಕೆ ಬೇಕಾಗಿರುವ ಬೀಜಗಳನ್ನು ಆಧಾರ ಮಾಡಿಕೊಂಡು ಬೆಲೆಯನ್ನು ನಿಗದಿ ಮಾಡಬೇಕು. ಪ್ರತಿಯೊಂದು ಹೋಮೆರ್ (ಎರಡು ಖಂಡುಗ) ಜವೆಗೋಧಿಯನ್ನು ಉತ್ಪಾದಿಸುವ ಹೊಲವು ಐವತ್ತು ಶೆಕೆಲ್ ಬೆಲೆಬಾಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:16
7 ತಿಳಿವುಗಳ ಹೋಲಿಕೆ  

ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.


ಅಂತೆಯೇ ನಾನು ಅವಳನ್ನು ನನಗಾಗಿ ಹದಿನೈದು ಶೆಕೆಲ್ ಬೆಳ್ಳಿ ಮತ್ತು ಸುಮಾರು ಒಂದು ಹೋಮೆರ್ ಹಾಗೂ ಒಂದು ಲೆಥೆಕ ಜವೆಗೋಧಿಗೂ ಕೊಂಡುಕೊಂಡೆನು.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”


ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು.


ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು