Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:2 - ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಯಾರಾದರು ನರಮಾನವರ ಪ್ರಾಣವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಬೆಳ್ಳಿನಾಣ್ಯದ ಮೇರೆಗೆ ನೀವು ಅವರಿಂದ ಕೊಡಿಸಬೇಕಾದ ಈಡಿನ ವಿವರ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:2
14 ತಿಳಿವುಗಳ ಹೋಲಿಕೆ  

“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,


ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.


“ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ,


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.


ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,


ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು.


ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.


ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ. ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು