Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಶುದ್ಧಪ್ರಾಣಿಯಲ್ಲಿ ಹುಟ್ಟಿದ ಚೊಚ್ಚಲು ಮರಿಯನ್ನು ಹರಕೆಮಾಡಿದ್ದರೆ, ಹರಕೆಮಾಡಿದವನು ನಿಗದಿಯಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ನಿಗದಿಯಾದ ಕ್ರಯಕ್ಕೆ ಮಾರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಶುದ್ಧ ಪಶುವಿನಲ್ಲಿ ಚೊಚ್ಚಲುಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಆ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಆ ಪಶುವನ್ನು ಮಾರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:27
7 ತಿಳಿವುಗಳ ಹೋಲಿಕೆ  

ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.


“ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.


“ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.


ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.


ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.


ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು.


ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು