Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:29 - ಕನ್ನಡ ಸಮಕಾಲಿಕ ಅನುವಾದ

29 “ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸಂಪೂರ್ಣ ಸರ್ವೇಶ್ವರನ ಸೊತ್ತಾಗುವುದಕ್ಕೆ ಒಪ್ಪಿಸಲಾದದ್ದು ನರಜಾತಿಯದಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕೇವಲ ಯೆಹೋವನ ಸೊತ್ತಾಗುವದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವದಕ್ಕಾಗದು; ಅವನಿಗೆ ಮರಣವೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:29
7 ತಿಳಿವುಗಳ ಹೋಲಿಕೆ  

“ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.


“ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು, ಆದರೆ ಸಮಸ್ತ ಜನರನ್ನು ಖಡ್ಗದಿಂದ ಸಂಪೂರ್ಣ ನಾಶಮಾಡಿದನು.


ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು