Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾವನಾದರು ಬಡವನಾಗಿದ್ದು ನೇಮಕವಾದ ನಾಣ್ಯವನ್ನು ಕೊಡಲಾಗದೆ ಹೋದರೆ ಅವನು ಹರಕೆ ಮಾಡಿ ಪ್ರತಿಷ್ಠಿಸಿದ ವ್ಯಕ್ತಿಯನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆ ಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ತೆರಬೇಕಾದ ನಾಣ್ಯ ಇಷ್ಟೆಂದು ನಿಗದಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:8
11 ತಿಳಿವುಗಳ ಹೋಲಿಕೆ  

ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.


ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.


“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.


ಅರವತ್ತು ವರುಷವೂ, ಅದಕ್ಕೂ ಹೆಚ್ಚಾದ ಪ್ರಾಯವುಳ್ಳ ಪುರುಷನಾಗಿದ್ದರೆ, ನೀನು ನೇಮಿಸುವ ಕ್ರಯವು ಹದಿನೈದು ಶೆಕೆಲ್, ಸ್ತ್ರೀಗೆ ಹತ್ತು ಶೆಕೆಲ್ ಆಗಿರಬೇಕು.


“ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು.


ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು