Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:18 - ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:18
11 ತಿಳಿವುಗಳ ಹೋಲಿಕೆ  

ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.


ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.


ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.


ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.


ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು, ಪೀಠದ ಮೇಲೆ ಚಿಮುಕಿಸಿದರು. ಟಗರುಗಳನ್ನು ವಧಿಸಿ ರಕ್ತವನ್ನು ಚಿಮುಕಿಸಿದರು. ಕುರಿಮರಿಗಳನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವುಗಳನ್ನು ವಧಿಸಿ, ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಮೇಲೆ ಚಿಮುಕಿಸಿದರು.


ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”


ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.


ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು