Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:31 - ಕನ್ನಡ ಸಮಕಾಲಿಕ ಅನುವಾದ

31 ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:31
39 ತಿಳಿವುಗಳ ಹೋಲಿಕೆ  

ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ.


ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಯೆಹೋವ ದೇವರು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು. ಆತನು ನಿಯಮವನ್ನು ಹೆಚ್ಚಿಸಿ, ಘನಪಡಿಸುವನು.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.


ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.


ಅವನು ಅದರ ಎಲ್ಲಾ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.


ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.


ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.


ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.


ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು.


ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು