Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:32 - ಕನ್ನಡ ಸಮಕಾಲಿಕ ಅನುವಾದ

32 “ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:32
19 ತಿಳಿವುಗಳ ಹೋಲಿಕೆ  

ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”


ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು.


ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇನೆಂದರೆ, ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಪ್ರತಿ ಗೋತ್ರಗಳ ಪ್ರತಿಯೊಂದು ಕುಟುಂಬಕ್ಕೆ ಒಂದರಂತೆ ಕುರಿಮರಿಯನ್ನು ತೆಗೆದುಕೊಳ್ಳಬೇಕು.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು