ಯಾಜಕಕಾಂಡ 5:4 - ಕನ್ನಡ ಸಮಕಾಲಿಕ ಅನುವಾದ4 ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಕೇಡಿಗಾಗಲಿ ಯಾವದಾದರೂ ಆಣೆಯಿಟ್ಟುಕೊಂಡರೆ ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು. ಅಧ್ಯಾಯವನ್ನು ನೋಡಿ |