Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:4 - ಕನ್ನಡ ಸಮಕಾಲಿಕ ಅನುವಾದ

4 ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಕೇಡಿಗಾಗಲಿ ಯಾವದಾದರೂ ಆಣೆಯಿಟ್ಟುಕೊಂಡರೆ ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:4
25 ತಿಳಿವುಗಳ ಹೋಲಿಕೆ  

ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


“ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.


ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು.


ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.


ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.


ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.


ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು.


ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ,


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


‘ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ,’ ಎಂದು ಆಣೆ ಇಟ್ಟುಕೊಂಡಿದ್ದರಿಂದ, ನಾವಾದರೋ ನಮ್ಮ ಪುತ್ರಿಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು,” ಎಂದರು.


ನಾವು ನಮ್ಮ ಪುತ್ರಿಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವುದಿಲ್ಲ, ಎಂದು ನಾವು ಯೆಹೋವ ದೇವರ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ?


ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.


ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು.


ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.


“ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಹರಕೆಗಳು ಇಲ್ಲವೆ ಪ್ರಾಣವನ್ನು ಬಂಧಿಸುವ ಬಾಯಿಂದ ಬಂದ ಮಾತು ಇದ್ದರೆ,


ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು.


ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”


ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು