Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:7 - ಕನ್ನಡ ಸಮಕಾಲಿಕ ಅನುವಾದ

7 “ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:7
24 ತಿಳಿವುಗಳ ಹೋಲಿಕೆ  

ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.


ಅದರಂತೆಯೇ ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಧಾನ್ಯಸಮರ್ಪಣೆಯೊಂದಿಗೆ ಸಮರ್ಪಿಸಬೇಕು, ಶುದ್ಧಪಡಿಸಿಕೊಳ್ಳುವವನಿಗೋಸ್ಕರ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.”


ಎಂತಲೂ, “ಒಂದು ಜೊತೆ ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿ ಅರ್ಪಿಸಬೇಕು,” ಎಂತಲೂ ಕರ್ತದೇವರ ನಿಯಮದಲ್ಲಿ ಹೇಳಿರುವ ಪ್ರಕಾರ ಅವರು ಸಮರ್ಪಿಸಿದರು.


ಅವನು ಇಸ್ರಾಯೇಲರ ಸಭೆಯ ಕಡೆಯಿಂದ ಪಾಪ ಪರಿಹಾರದ ಬಲಿಗಾಗಿ ಎರಡು ಹೋತಗಳನ್ನು, ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಳ್ಳಬೇಕು.


ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.


ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು.


“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.


ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.


“ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.


“ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.


ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ ಸಮರ್ಪಿಸಬೇಕು.


“ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ.


ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.


ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು.


ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು