Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:14 - ಕನ್ನಡ ಸಮಕಾಲಿಕ ಅನುವಾದ

14 “ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಧಾನ್ಯನೈವೇದ್ಯದ ಬಗ್ಗೆ ನಿಯಮಗಳಿವು: ಆರೋನನ ವಂಶಜರು ನೈವೇದ್ಯ ದ್ರವ್ಯವನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಎದುರಿಗೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಧಾನ್ಯನೈವೇದ್ಯ ವಿಷಯವಾದ ನಿಯಮಗಳು. ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಇದು ಧಾನ್ಯಸಮರ್ಪಣೆಯ ನಿಯಮವಾಗಿದೆ: ಆರೋನನ ಪುತ್ರರು ಅದನ್ನು ಸಮರ್ಪಿಸಲು ಯಜ್ಞವೇದಿಕೆಯ ಮುಂಭಾಗದಲ್ಲಿ ಯೆಹೋವನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:14
12 ತಿಳಿವುಗಳ ಹೋಲಿಕೆ  

ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.


ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು.


“ ‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್ ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು.


ಬಲಿಪೀಠದ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು, ಅದು ಎಂದಿಗೂ ಆರಬಾರದು.


ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.


ಮೋಶೆಯು ಆರೋನನೊಂದಿಗೂ ಉಳಿದ ಅವನ ಪುತ್ರರಾದ ಎಲಿಯಾಜರನೊಂದಿಗೂ ಈತಾಮಾರನೊಂದಿಗೂ ಮಾತನಾಡಿ, “ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಗಳಲ್ಲಿ ಉಳಿದಿರುವ ಧಾನ್ಯ ಸಮರ್ಪಣೆಯನ್ನು ತೆಗೆದುಕೊಳ್ಳಿರಿ ಮತ್ತು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿಯಿಲ್ಲದ ರೊಟ್ಟಿ ತಿನ್ನಿರಿ. ಏಕೆಂದರೆ ಅದು ಮಹಾಪರಿಶುದ್ಧವಾದದ್ದು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.


ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು