Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:17 - ಕನ್ನಡ ಸಮಕಾಲಿಕ ಅನುವಾದ

17 ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನಿಗೆ ಹೋಮ ರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಡಲಾಗಿದೆ. ಅದಕ್ಕೆ ಹುಳಿ ಕಲಸಿ ಸುಡಕೂಡದು. ದೋಷಪರಿಹಾರಕ ಬಲಿಯಂತೆ ಹಾಗು ಪ್ರಾಯಶ್ಚಿತ್ತ ಬಲಿದ್ರವ್ಯದಂತೆ ಅದು ಸಹ ಮಹಾಪರಿಶುದ್ಧವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕೆ ಹುಳಿಕಲಸಿ ಸುಡಕೂಡದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹುಳಿಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:17
14 ತಿಳಿವುಗಳ ಹೋಲಿಕೆ  

“ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.


“ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


“ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.


ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”


ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು.


ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.


ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.


“ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.


ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು