Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:2 - ಕನ್ನಡ ಸಮಕಾಲಿಕ ಅನುವಾದ

2 “ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮಲ್ಲಿ ಯಾರಾದರು ಮತ್ತೊಬ್ಬನಿಂದ ತಮ್ಮ ವಶಕ್ಕೆ ಕೊಡಲಾದ ವಸ್ತುವಿನ ವಿಷಯದಲ್ಲಾಗಲಿ, ತಮ್ಮ ಬಳಿಯಲ್ಲಿ ಇಡಲಾದ ಅಡವಿನ ವಿಷಯದಲ್ಲಾಗಲಿ, ತಾನು ಮಾಡಿದ ಕಳವಿನ ವಿಷಯದಲ್ಲಾಗಲಿ, ಸುಳ್ಳಾಡಿಯೋ, ಮತ್ತೊಬ್ಬನನ್ನು ಮೋಸಗೊಳಿಸಿಯೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳವಿನ ವಿಷಯದಲ್ಲಾಗಲಿ ಸುಳ್ಳಾಡುವದರಿಂದಲೋ ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದಲೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಅಡವು ಇಟ್ಟ ವಸ್ತುವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳುವಿನ ವಿಷಯದಲ್ಲಾಗಲಿ ಸುಳ್ಳಾಡುವುದರಿಂದಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:2
25 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!


ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.


“ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.


“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.


ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.


ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು