Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:3 - ಕನ್ನಡ ಸಮಕಾಲಿಕ ಅನುವಾದ

3 ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತೊಬ್ಬನು ಕಳಕೊಂಡದ್ದನ್ನು ತಾನು ಕಂಡು ಬೊಂಕಿ ಸುಳ್ಳಾಣೆಯಿಟ್ಟದ್ದರಿಂದಲೋ ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:3
14 ತಿಳಿವುಗಳ ಹೋಲಿಕೆ  

“ ‘ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣ ಮಾಡಬಾರದು. ನಿಮ್ಮ ದೇವರ ಹೆಸರನ್ನು ಅಗೌರವಿಸಬಾರದು. ನಾನೇ ಯೆಹೋವ ದೇವರು.


“ನೀವು ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ, ಅದು ನಿಮಗೆ ಸಿಕ್ಕಿದರೆ ನೀವು ಅದನ್ನು ಖಂಡಿತವಾಗಿ ತಿರುಗಿ ಅವನಿಗೆ ತಂದುಕೊಡಬೇಕು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”


“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.


“ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಚಡ್ಡಿಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯವರೆಗೆ ಇರಬೇಕು.


ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.


ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.


ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು