Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:4 - ಕನ್ನಡ ಸಮಕಾಲಿಕ ಅನುವಾದ

4 ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-5 ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆಯಾ ವಸ್ತುಗಳನ್ನೇ ಅಂದರೆ ಕದ್ದದ್ದನ್ನೂ ಮೋಸದಿಂದ ಪಡೆದದ್ದನ್ನೂ ತನ್ನ ವಶಕ್ಕೆ ತೆಗೆದುಕೊಂಡದ್ದನ್ನೂ ತಾನು ಕಂಡುಕೊಂಡದ್ದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:4
20 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು.


ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,


ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,


ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.


ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.


ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ.


ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು.


ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.


ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.


ಅವನು ಮಾಡಿದ ಪಾಪವನ್ನು ಅರಿಕೆ ಮಾಡಬೇಕು. ಅವನ ಅಪರಾಧದ ಬದಲುಕೊಟ್ಟು, ಅದರ ಸಂಗಡ ಅದರ ಐದನೆಯ ಪಾಲನ್ನು ಕೂಡಿಸಿ, ಯಾರಿಗೆ ಅಪರಾಧ ಮಾಡಿದರೋ, ಅವರಿಗೆ ಕೊಡಬೇಕು.


ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು.


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.


ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.


ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು