Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:24 - ಕನ್ನಡ ಸಮಕಾಲಿಕ ಅನುವಾದ

24 ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಂಥ ಪಶುವು ರೋಗದಿಂದ ಸತ್ತದ್ದಾದರೆ ಇಲ್ಲವೇ ಕಾಡು ಮೃಗವು ಕೊಂದದ್ದಾದರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ತನ್ನಷ್ಟಕ್ಕೆ ತಾನೇ ಸತ್ತ ಪ್ರಾಣಿಯ ಅಥವಾ ಬೇರೆ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಂದಿಗೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:24
8 ತಿಳಿವುಗಳ ಹೋಲಿಕೆ  

“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಹೊಲದಲ್ಲಿ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಹಾಕಬೇಕು.


ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.


“ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.


ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.


ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು