Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:11 - ಕನ್ನಡ ಸಮಕಾಲಿಕ ಅನುವಾದ

11 ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿವಿುಕಿಸಿ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:11
13 ತಿಳಿವುಗಳ ಹೋಲಿಕೆ  

ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು.


ಮೋಶೆ ಅವರಿಗೆ, “ಇದನ್ನು ಯಾರೂ ಮರುದಿನದವರೆಗೆ ಇಟ್ಟುಕೊಳ್ಳಬಾರದು,” ಎಂದು ಹೇಳಿದನು.


ಬಿದ್ದಿದ್ದ ಮಂಜು ಹೋದ ಮೇಲೆ, ಗಟ್ಟಿಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕದಾದದ್ದೂ, ಗುಂಡಾದದ್ದೂ ಮರುಭೂಮಿಯಲ್ಲಿ ಹರಡಿತ್ತು.


ಆದರೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಳ್ಳಬೇಕು. ಇದರಿಂದಲೇ ನೀನು ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇನ್ನೂ ಮಾತನಾಡಿ, “ನಿನ್ನ ಕೈಯನ್ನು ನಿನ್ನ ಉಡಿಯಲ್ಲಿ ಇಟ್ಟುಕೋ,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆದನು. ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.


ಪ್ರತಿದಿನ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞ ಮಾಡಬೇಕು. ಬಲಿಪೀಠವನ್ನು ಶುದ್ಧಿಮಾಡುವುದಕ್ಕಾಗಿ ಅದರ ಮೇಲೆ ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.


ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.


ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು.


ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ, ತನ್ನ ಬೆರಳಿನಿಂದ ಆ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು