Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:14 - ಕನ್ನಡ ಸಮಕಾಲಿಕ ಅನುವಾದ

14 ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:14
17 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಬಳಿಗೆ ಸಮೀಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯರಿಗೂ ದೋಷಪರಿಹಾರ ಬಲಿಗಾಗಿ ಎಳೆಯ ಹೋರಿಯನ್ನು ಕೊಡಬೇಕು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಕೊಬ್ಬಿದ ದಹನಬಲಿಗಳನ್ನು ಕಾಣಿಕೆಯಾಗಿ ಟಗರುಗಳನ್ನು; ಹೋತ ಹೋರಿಗಳ ಯಜ್ಞವನ್ನು ಅರ್ಪಿಸುವೆನು.


ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.


“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


“ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.


ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.


ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.


“ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.


ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಬಲಿಪೀಠವನ್ನು ಶುದ್ಧೀಕರಿಸಿ ಮತ್ತು ಅದಕ್ಕೆ ಪ್ರಾಯಶ್ಚಿತ್ತವನ್ನು ಮಾಡಿರಿ.


ಅವನು ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವುದಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಪರಿಹಾರಕ ಬಲಿಯನ್ನು ಅರ್ಪಿಸಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು