Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ ಯಜ್ಞವೇದಿಯನ್ನು ಶುದ್ಧಪಡಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಯಜ್ಞವೇದಿಯ ನಿವಿುತ್ತ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:15
23 ತಿಳಿವುಗಳ ಹೋಲಿಕೆ  

ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.


ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು.


ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು.


“ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು.


ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.


ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.


ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.


“ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು