Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನೂ ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನೂ ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:2
15 ತಿಳಿವುಗಳ ಹೋಲಿಕೆ  

“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ದಹನಬಲಿಗಾಗಿ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


“ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,


ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ.


ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು.


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


“ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.


“ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.


ಅವನು ಇಸ್ರಾಯೇಲರ ಸಭೆಯ ಕಡೆಯಿಂದ ಪಾಪ ಪರಿಹಾರದ ಬಲಿಗಾಗಿ ಎರಡು ಹೋತಗಳನ್ನು, ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು