Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:3 - ಕನ್ನಡ ಸಮಕಾಲಿಕ ಅನುವಾದ

3 ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮತ್ತು ನೀನು ಇಸ್ರಯೇಲರ ಸಂಗಡ ಮಾತಾಡಿ ಅವರಿಗೆ, ‘ಈ ದಿನ ಸರ್ವೇಶ್ವರ ಸ್ವಾಮಿ ಪ್ರತ್ಯಕ್ಷರಾಗುತ್ತಾರೆ. ಆದುದರಿಂದ ನೀವು ಅವರ ಸನ್ನಿಧಿಯಲ್ಲಿ ಸಮರ್ಪಿಸಲು ದೋಷಪರಿಹಾರಕ್ಕಾಗಿ ಒಂದು ಹೋತವನ್ನು, ದಹನಬಲಿಗಾಗಿ ಒಂದು ವರ್ಷದ ಕಳಂಕರಹಿತವಾದ ಒಂದು ಕರು ಹಾಗು ಒಂದು ಕುರಿಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಅವರಿಗೆ - ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನಾದದರಿಂದ ನೀವು ಆತನ ಸನ್ನಿಧಿಯಲ್ಲಿ ಸಮರ್ಪಿಸುವದಕ್ಕೋಸ್ಕರ ದೋಷಪರಿಹಾರಕ್ಕಾಗಿ ಹೋತವನ್ನೂ ಸರ್ವಾಂಗಹೋಮಕ್ಕಾಗಿ ಒಂದು ವರುಷದ ಪೂರ್ಣಾಂಗವಾದ ಕರುವನ್ನೂ ಕುರಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:3
22 ತಿಳಿವುಗಳ ಹೋಲಿಕೆ  

ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಇವರು ತಮ್ಮ ಹೆಂಡತಿಯರನ್ನು ಹೊರಡಿಸಿಬಿಡುವೆವೆಂದು ಪ್ರತಿಜ್ಞೆ ಮಾಡಿ, ತಾವು ಅಪರಾಧಸ್ಥರಾದ್ದರಿಂದ ಅಪರಾಧ ಕಳೆಯುವುದಕ್ಕೆ ಮಂದೆಯಿಂದ ತಂದ ಒಂದು ಟಗರನ್ನು ಅರ್ಪಿಸಿದರು.


ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು.


“ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.


ಅವನು ಇಸ್ರಾಯೇಲರ ಸಭೆಯ ಕಡೆಯಿಂದ ಪಾಪ ಪರಿಹಾರದ ಬಲಿಗಾಗಿ ಎರಡು ಹೋತಗಳನ್ನು, ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಳ್ಳಬೇಕು.


“ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.


“ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.


ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು.


ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ,


ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.


ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’ ” ಎಂದನು.


ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,


“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು