Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:15 - ಕನ್ನಡ ಸಮಕಾಲಿಕ ಅನುವಾದ

15 ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಲ್ಲರಿಗೆ ನ್ಯಾಯತೀರಿಸುವದಕ್ಕೂ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನ್ನ ಮೇಲೆ ಹೇಳಿದ ಎಲ್ಲಾ ಕಠಿನವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವದಕ್ಕೂ ಬಂದನು ಎಂಬದಾಗಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಸ್ಪಾನ್ ನಸಲ್ಲ್ಯಾ ವಾಟೆನ್ ಜಾವ್ನ್ ದೆವಸ್ಪಾನಾನ್ ನಸಲ್ಲಿ ಕಾಮಾ ಕರಲ್ಲ್ಯಾ ಹರ್ ಎಕ್ಲ್ಯಾಕ್, ಅನಿ ಅಪ್ನಾಚ್ಯಾ ವಿರೊದ್ ಬೊಲುನ್ ಕರಲ್ಲ್ಯಾ ಖಟೊರ್ ಕಾಮಾಚ್ಯಾ ಸಾಟ್ನಿ ತೊ ತೆಂಕಾ ಚುಕಿದಾರ್ ಮನುನ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:15
35 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,


ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.


ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


“ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.


ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.


ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ.


ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ. ಭೂಲೋಕದಲ್ಲೆಲ್ಲಾ ಅವರ ಮಾತು ಮುಂದುವರೆದಿದೆ.


ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.


ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.


ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ; ನಿಮ್ಮ ವೈರಿಗಳು ನಿಮ್ಮ ಹೆಸರನ್ನು ದುರುಪಯೋಗ ಮಾಡುತ್ತಾರೆ.


ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು