Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:5 - ಕನ್ನಡ ಸಮಕಾಲಿಕ ಅನುವಾದ

5 ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮ್ಕಾ ಅದ್ದಿಚ್ ಗೊತ್ತ್ ಹಾಯ್ ಜಾಲ್ಯಾರ್ಬಿ ಉಲ್ಲ್ಯಾ ಫಾಟ್ಲ್ಯಾ ಸಂಗ್ತಿಯಾ ಮಿಯಾ ತುಮ್ಕಾ ಯಾದ್ ಕರುಕ್ ಆಶಾ ಕರ್ತಾ, ಧನಿಯಾನ್ ಆಪ್ಲ್ಯಾ ಲೊಕಾಕ್ನಿ ಇಜಿಪ್ತ್ ದೆಶಾತ್ನಾ ಭಾಯ್ರ್ ಹಾನುನ್ ಬಚಾವ್ ಕರಲ್ಲೆ ಯಾದ್ ಕರುನ್ ಘೆವಾ. ಖರೆ ಮಾನಾ ಧನಿಯಾನ್ ವಿಶ್ವಾಸ್ ಕರಿನಸಲ್ಲ್ಯಾ ಲೊಕಾಕ್ನಿ ನಾಸ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:5
14 ತಿಳಿವುಗಳ ಹೋಲಿಕೆ  

“ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?


ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ


ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.


ನಾನು ನಿಮಗೆ ಕೆಲವು ವಿಷಯಗಳನ್ನು ಜ್ಞಾಪಕ ಪಡಿಸುವುದಕ್ಕಾಗಿ ಬಹಳ ಧೈರ್ಯದಿಂದ ಹೀಗೆ ಬರೆದಿದ್ದೇನೆ.


ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು.


ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಲಿಲ್ಲ.


ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ನೀವು ಸತ್ಯವನ್ನು ತಿಳಿಯದವರೆಂದು ನಾನು ಭಾವಿಸುತ್ತಿಲ್ಲ, ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಬರುವುದಿಲ್ಲ ಎಂಬುವುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು