Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:8 - ಕನ್ನಡ ಸಮಕಾಲಿಕ ಅನುವಾದ

8 ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿದ್ದರೂ ಈ ಜನರು ಸ್ವಪ್ನಾವಸ್ಥೆಯಲ್ಲಿರುವವರಂತೆ ಅದೇ ರೀತಿಯಾಗಿ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ, ಮಹಾಪದವಿಯವರನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ಸಭೆಯಲ್ಲಿ ಪ್ರವೇಶಿಸಿರುವ ಜನರಿಗೂ ಇದೇ ರೀತಿಯಾಗುವುದು. ಅವರ ಕನಸುಗಳೇ ಅವರಿಗೆ ಮಾರ್ಗದರ್ಶಿಯಾಗಿವೆ. ಅವರು ಪಾಪಗಳಿಂದಲೇ ತಮ್ನನ್ನು ಮಲಿನ ಮಾಡಿಕೊಳ್ಳುತ್ತಾರೆ. ಅವರು ಪ್ರಭುವಿನ ಅಧಿಕಾರವನ್ನು ತಿರಸ್ಕರಿಸುತ್ತಾರೆ; ಪ್ರಭಾವದಿಂದ ಕೂಡಿದ ದೇವದೂತರ ವಿರುದ್ಧ ಕೆಟ್ಟದ್ದನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆಚ್ ತೆಂಚಿ ದರ್ಶನಾಚ್ ತೆಂಕಾ ವಾಟ್ ದಾಕ್ವುತ್ಯಾತ್ ಅಪ್ಲ್ಯಾ ಪಾಪಾನಿಚ್ ಅಪ್ನಾಕ್ ಅಶುದ್ದ್ ಕರುನ್ ಘೆತಾತ್. ತೆನಿ ಧನಿಯಾಚೊ ಅಧಿಕಾರ್ ತಿರಸ್ಕಾರ್ ಕರ್ತಾತ್, ಮೊಟ್ಯಾ ಮಹಿಮೆಚ್ಯಾ ದೆವಾಚ್ಯಾ ದುತಾಂಚ್ಯಾ ವಿರೊದ್ ಹೊವ್ನ್ ಬುರ್ಶೆಚ್ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:8
23 ತಿಳಿವುಗಳ ಹೋಲಿಕೆ  

ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.


ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


“ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು.


ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.


“ದೇವರನ್ನು ದೂಷಿಸಬೇಡ, ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.


ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.


“ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


“ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.


“ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ.


ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.


ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು