Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:1 - ಕನ್ನಡ ಸಮಕಾಲಿಕ ಅನುವಾದ

1 ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕವರ್ಗದವನೂ ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:1
23 ತಿಳಿವುಗಳ ಹೋಲಿಕೆ  

ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.


ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,


ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.


ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಆಮೋಚನ ಮಗ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:


ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:


ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.


ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು,


ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.


ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.


ಅವನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ, ಯೆಹೋವ ದೇವರು ಹೇಳಿದ ಮಾತುಗಳಂತೆ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:


ಗಲ್ಲೀಮ್ ಮಗಳೇ, ನಿನ್ನ ಸ್ವರವೆತ್ತಿ ಕೂಗು; ಬಡ ಅನಾತೋತೇ, ಲಯೆಷಿನವರೆಗೂ ಕೇಳಿಸುವಂತೆ ಕೂಗು.


ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ?


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ಅನಾತೋತ್ ಊರಿನವರು 128


ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,


ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು