Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:11 - ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಸರ್ವೇಶ್ವರ ಸ್ವಾಮಿ, “ಎಲೈ ಯೆರೆಮೀಯನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ಅದಕ್ಕೆ ನಾನು, ಚಚ್ಚರ ಮರದ ರೆಂಬೆಯನ್ನು ನೋಡುತ್ತಿದ್ದೇನೆ,” ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಯೆಹೋವನು - ಯೆರೆಮೀಯನೇ, ಏನು ನೋಡುತ್ತೀ ಎಂದು ನನ್ನನ್ನು ಕೇಳಿದನು, ಅದಕ್ಕೆ ನಾನು - ಚಚ್ಚರ ಮರದ ರೆಂಬೆಯನ್ನು ನೋಡುತ್ತೇನೆ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:11
11 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ.


ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.


ಆಗ ದೂತನು ನನಗೆ, “ಏನು ನೋಡುತ್ತೀ?” ಎಂದಾಗ, ನಾನು, “ಹಾರುವ ಸುರುಳಿಯನ್ನು ನೋಡುತ್ತಿದ್ದೇನೆ. ಅದರ ಉದ್ದವು ಒಂಬತ್ತು ಮೀಟರ್, ಅದರ ಅಗಲವು ನಾಲ್ಕುವರೆ ಮೀಟರ್ ಇದೆ,” ಎಂದೆನು.


ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.


ಆಗ ಯೆಹೋವ ದೇವರು ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.


ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


“ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,


ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು, ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು, ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು.


ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


“ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ, ನನ್ನ ಯಾವುದೇ ಮಾತು ಇನ್ನು ತಡವಾಗದು. ನಾನು ಹೇಳಿದ್ದೆಲ್ಲವನ್ನು ನೆರವೇರುವುದೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು