Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಸ್ವಾಮಿ ನನಗೆ, “ಸರಿಯಾಗಿ ನೋಡಿದೆ; ನನ್ನ ಮಾತನ್ನು ನೆರವೇರಿಸುವುದಕ್ಕೆ ಎಚ್ಚರಗೊಂಡಿದ್ದೇನೆಂದು ತಿಳಿದುಕೊ” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೋವನು ನನಗೆ - ಸರಿಯಾಗಿ ನೋಡಿದ್ದೀ, ನನ್ನ ಮಾತನ್ನು ನೆರವೇರಿಸುವದಕ್ಕೆ ಎಚ್ಚರಗೊಂಡಿದ್ದೇನೆ ಎಂದು ತಿಳಿದುಕೋ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನ್ನ ಮಾತನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೊ ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:12
15 ತಿಳಿವುಗಳ ಹೋಲಿಕೆ  

“ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ, ನನ್ನ ಯಾವುದೇ ಮಾತು ಇನ್ನು ತಡವಾಗದು. ನಾನು ಹೇಳಿದ್ದೆಲ್ಲವನ್ನು ನೆರವೇರುವುದೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆಗ ಯೇಸು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟೆ, ಅದರಂತೆಯೇ ಮಾಡು, ಆಗ ನೀನು ಬದುಕುವೆ,” ಎಂದರು.


ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.


ನೀವು ನನ್ನ ಹತ್ತಿರ ಮಾತನಾಡಿದಾಗ, ಯೆಹೋವ ದೇವರು ನಿಮ್ಮ ಮಾತುಗಳನ್ನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೆಯದು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಆಗ ಯೆಹೋವ ದೇವರು ನನಗೆ, “ಅವರು ಹೇಳಿದ್ದು ಸರಿಯಾಗಿದೆ.


ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು.


ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು.


ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಆಗ ಯೆಹೋವ ದೇವರು ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು