Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸ್ವಾಮಿ ನನಗೆ ಹೀಗೆಂದರು : “ಈ ನಾಡಿನ ನಿವಾಸಿಗಳೆಲ್ಲರ ಮೇಲೆ ಉತ್ತರದಿಂದ ಕೇಡು ಉಕ್ಕಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ನನಗೆ ಹೀಗೆ ಹೇಳಿದನು - ಈ ದೇಶನಿವಾಸಿಗಳೆಲ್ಲರ ಮೇಲೆ ಬಡಗಲಿಂದ ಕೇಡು ಉಕ್ಕಿ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:14
17 ತಿಳಿವುಗಳ ಹೋಲಿಕೆ  

ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.


“ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”


“ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇ. ಸೂರ್ಯೋದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸುವನು. ಅವನು ಜೇಡಿ ಮಣ್ಣಿನಂತೆಯೂ, ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಅವನು ಬರುವನು.


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.


“ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು ಅನೇಕ ಅರಸರು ಎಚ್ಚರಗೊಳ್ಳುವರು. ಅವರು ಲೋಕದ ಕಟ್ಟಕಡೆಯಿಂದ ಬರುತ್ತಾರೆ.


ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. ಅಲ್ಲಿಂದ ಅದು ಹಿಡಿಯಲಾಗುವುದು. ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. ಯಾವುದೂ ವ್ಯರ್ಥವಾಗಿ ತಿರುಗದು.


“ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.


ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.


“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.


ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು