Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:5 - ಕನ್ನಡ ಸಮಕಾಲಿಕ ಅನುವಾದ

5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಂಥಾ ಬೊಂಬೆಗಳು ಸೌತೆಯ ತೋಟದ ಬೆದರುಗಂಬದಂತಿವೆ, ಮಾತಾಡಲಾರವು; ಹೊತ್ತುಕೊಂಡುಹೋಗಬೇಕು, ನಡೆಯಲಾರವು. ಅವುಗಳಿಗೆ ಅಂಜಬೇಡಿರಿ, ಕೇಡುಮಾಡಲಾರವು, ಮೇಲುಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:5
16 ತಿಳಿವುಗಳ ಹೋಲಿಕೆ  

ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರ ಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.


ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ.


ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”


ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.


ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.


ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.


ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು.


ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು, ಅವಳ ದೇವಾಲಯಕ್ಕೆ ಪ್ರಾರ್ಥಿಸುವುದಕ್ಕೆ ಬಂದರೂ ಅದಕ್ಕೆ ಸಫಲವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು