Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:8
16 ತಿಳಿವುಗಳ ಹೋಲಿಕೆ  

ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.


“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”


ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.


ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.


ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.


ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು