Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ, ನನ್ನನ್ನು ನೋಡುತ್ತಾ ನಿಮ್ಮೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀರಿ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನೀನು ನನ್ನನ್ನು ತಿಳಿದಿದ್ದೀ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಯೆಹೋವನೇ, ನಿನಗೆ ನನ್ನ ಹೃದಯದ ಬಗ್ಗೆ ತಿಳಿದಿದೆ, ನೀನು ನನ್ನನ್ನು ನೋಡಿ ನನ್ನ ಮನಸ್ಸನ್ನು ಪರೀಕ್ಷಿಸುವೆ. ವಧೆಗೆ ಎಳೆದುಕೊಂಡು ಹೋಗುವ ಕುರಿಗಳಂತೆ ಆ ಕೆಡುಕರನ್ನು ಎಳೆದುಹಾಕು. ಅವರನ್ನು ವಧೆಯ ದಿನಕ್ಕೆಂದು ಆರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:3
23 ತಿಳಿವುಗಳ ಹೋಲಿಕೆ  

ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.


ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.


ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.


ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ಈ ಪ್ರಕಾರ ಬಾಬಿಲೋನಿಯರ ದೇಶದಲ್ಲಿ ಹತರಾಗಿ ಬೀಳುವರು. ಅದರ ಬೀದಿಗಳಲ್ಲಿಯೇ ಕತ್ತಿಗೆ ತುತ್ತಾಗುವರು.


ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ.


ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ, ಅಂತರಿಂದ್ರಿಯಗಳನ್ನೂ, ಹೃದಯವನ್ನೂ ನೋಡುವವರೇ, ನೀವು ಅವರಿಗೆ ಪ್ರತಿದಂಡನೆ ಮಾಡುವುದನ್ನು ನಾನು ನೋಡುವಂತೆ ಮಾಡಿ. ಏಕೆಂದರೆ, ನಿಮಗೆ ನನ್ನ ವ್ಯಾಜ್ಯವನ್ನು ತಿಳಿಯಮಾಡಿದ್ದೇನೆ.


ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.


ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.


ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು