Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:16 - ಕನ್ನಡ ಸಮಕಾಲಿಕ ಅನುವಾದ

16 ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:16
36 ತಿಳಿವುಗಳ ಹೋಲಿಕೆ  

ಆದಕಾರಣ ನ್ಯಾಯ ನಿರ್ಣಯವು ನಮಗೆ ದೂರವಾಗಿದೆ. ನೀತಿಯು ನಮ್ಮನ್ನು ತಲುಪುವುದಿಲ್ಲ, ಬೆಳಕನ್ನು ಎದುರು ನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ; ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲಿಯೇ ನಡೆಯುತ್ತೇವೆ.


ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.


ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.


ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.


“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ, ಹಾಳಾಗಿಯೂ, ಶೂನ್ಯವಾಗಿಯೂ ಇತ್ತು. ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.


ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ.


ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.


ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು.


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.


ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.


ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.


ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.


ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.


ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು.


ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಜನರ ಮುಂದೆ ಅಡೆತಡೆಗಳನ್ನು ಇಡುತ್ತೇನೆ. ತಂದೆಯೂ, ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು. ನೆರೆಯವರೂ, ಅವರ ಸ್ನೇಹಿತರೂ ನಾಶವಾಗುವರು.”


“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.


ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.


ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.


ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.


ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.


ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.


ಕುರುಡರ ಹಾಗೆ ಗೋಡೆಯನ್ನು ತಡವರಿಸುತ್ತೇವೆ. ಕಣ್ಣಿಲ್ಲದವರ ಹಾಗೆ ಮುಟ್ಟಿ ನೋಡುತ್ತೇವೆ. ಮಧ್ಯಾಹ್ನದಲ್ಲಿ ರಾತ್ರಿಯಂತೆ ಎಡವುತ್ತೇವೆ. ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು