Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:19 - ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದಕ್ಷಿಣದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:19
21 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.


ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ನಿಮ್ಮ ದೇಶದಲ್ಲೆಲ್ಲಾ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ಮುತ್ತಿಗೆ ಹಾಕುವರು. ನೀವು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿಮ್ಮ ಗೋಡೆಗಳನ್ನು ಕೆಡವಿಬಿಡುವರು.


ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.


ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.


ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ.


ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:


ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”


ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”


ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು