ಯೆರೆಮೀಯ 14:18 - ಕನ್ನಡ ಸಮಕಾಲಿಕ ಅನುವಾದ18 ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’” ಅಧ್ಯಾಯವನ್ನು ನೋಡಿ |