Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:18 - ಕನ್ನಡ ಸಮಕಾಲಿಕ ಅನುವಾದ

18 ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:18
19 ತಿಳಿವುಗಳ ಹೋಲಿಕೆ  

ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.


ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.


ಹೊಲಕ್ಕೆ ಹೋಗಬೇಡ; ದಾರಿಯಲ್ಲಿ ನಡೆಯಬೇಡ. ಏಕೆಂದರೆ ಶತ್ರುವಿನ ಖಡ್ಗವೂ, ಅಂಜಿಕೆಯೂ ಸುತ್ತಲೂ ಇವೆ.


“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು