Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:20 - ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು; ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:20
27 ತಿಳಿವುಗಳ ಹೋಲಿಕೆ  

ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.


“ನೀನು ನನ್ನ ಜನರ ಮಾರ್ಗವನ್ನು ಪರೀಕ್ಷಿಸಿ ತಿಳಿದುಕೊಳ್ಳುವಂತೆ, ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ಈ ಪ್ರಕಾರ ಯೆರೂಸಲೇಮು ಸೆರೆಯಾಗುವ ದಿವಸದವರೆಗೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ವಾಸವಾಗಿದ್ದನು. ಯೆರೂಸಲೇಮು ಹಿಡಿಯಲಾಗುವಾಗ ಅಲ್ಲೇ ಇದ್ದನು.


ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ:


ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.


ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.


ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.


ಆದರೆ ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ. ಅವರ ಹಟಮಾರಿತನಕ್ಕೆ ಪ್ರತಿಯಾಗಿ, ನಿನ್ನನ್ನು ಹಟವಾದಿಯನ್ನಾಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು