Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:6 - ಕನ್ನಡ ಸಮಕಾಲಿಕ ಅನುವಾದ

6 ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:6
28 ತಿಳಿವುಗಳ ಹೋಲಿಕೆ  

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.


“ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ”


ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


ಹಠಮಾರಿ ಹಸುವಿನ ಹಾಗೆ ಇಸ್ರಾಯೇಲು ಹಟಮಾರಿಯಾಗಿದೆ. ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು?


“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.


ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಅವರ ಮನೆಗಳೂ ಹೊಲಗಳೂ, ಹೆಂಡತಿಯರೂ ಸಹಿತವಾಗಿ ಬೇರೊಬ್ಬರ ಪಾಲಾಗುವುವು. ಏಕೆಂದರೆ, ದೇಶದ ನಿವಾಸಿಗಳ ಮೇಲೆ ನನ್ನ ಕೈಚಾಚುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.


ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.


ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು