Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:7 - ಕನ್ನಡ ಸಮಕಾಲಿಕ ಅನುವಾದ

7 ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ನನ್ನ ಜನರನ್ನು ನಾಶಮಾಡಿ ಅವರಿಗೆ ಶೋಕವನ್ನು ನೀಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು, ಹಿಂದಿರುಗದೆ ಇದ್ದುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಜನರನ್ನು ದೇಶದ ಉಕ್ಕಡಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು; ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:7
21 ತಿಳಿವುಗಳ ಹೋಲಿಕೆ  

ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ವಿದೇಶಿಯರನ್ನು ಬಾಬಿಲೋನಿಗೆ ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದು ಮಾಡುವರು; ಏಕೆಂದರೆ ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


“ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ,


ನೀವು ಪುತ್ರಪುತ್ರಿಯರನ್ನು ಪಡೆಯುವಿರಿ, ಆದರೆ ಅವರ ಕೂಡ ಸಂತೋಷಿಸುವುದಿಲ್ಲ. ಏಕೆಂದರೆ ಅವರು ಸೆರೆಯಾಗಿ ಹೋಗುವರು.


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ನಿಮ್ಮ ಪುತ್ರಪುತ್ರಿಯರು ಬೇರೆ ಜನರಿಗೆ ವಶಪಡಿಸಿರಲು, ನೀವು ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಇರುವಿರಿ. ಆದರೆ ಅವರನ್ನು ಕಾಪಾಡಲು ನಿಮ್ಮ ಕೈಯಿಂದ ಸಾಧ್ಯವಾಗದೆ ಇರುವುದು.


ನಿಮ್ಮ ಗರ್ಭದ ಫಲಕ್ಕೂ ಪಶುಗಳ ಹಿಂಡಿಗೂ, ಕುರಿಗಳ ಮಂದೆಗಳಿಗೂ ಶಾಪ.


ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ.


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು