Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:15 - ಕನ್ನಡ ಸಮಕಾಲಿಕ ಅನುವಾದ

15 ‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:15
26 ತಿಳಿವುಗಳ ಹೋಲಿಕೆ  

ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.


“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”


ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”


“ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.


ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”


“ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,


ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.


ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು