Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:22 - ಕನ್ನಡ ಸಮಕಾಲಿಕ ಅನುವಾದ

22 ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಸಬ್ಬತ್ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿ. ಯಾವ ಕೆಲಸವನ್ನೂ ಮಾಡದಿರಿ. ನಾನು ನಿಮ್ಮ ಪೂರ್ವಜರಿಗೆ ಆಜ್ಞೆಮಾಡಿದಂತೆ ಸಬ್ಬತ್ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ; ಸಬ್ಬತ್ ದಿನವನ್ನು ನನ್ನ ದಿನವೆಂದು ಆಚರಿಸಿರಿ; ನಿಮ್ಮ ಪಿತೃಗಳಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:22
19 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.


“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,


“ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು.


ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸಬ್ಬತ್ತಿಗೂ ಕರ್ತ ದೇವರಾಗಿದ್ದೇನೆ,” ಎಂದರು.


ನೀನು ನನ್ನ ಪರಿಶುದ್ಧ ಸಂಗತಿಗಳನ್ನು ತಿರಸ್ಕರಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರ ಪಡಿಸಿದ್ದಿ.


“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.


“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.


ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು