Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಯೆಹೋವನು ಹೀಗನ್ನುತ್ತಾನೆ - ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವದನ್ನು ಆಲಿಸಿರಿ: “ಬೇರೆ ಜನಾಂಗದ ಜನರಿಗೆ ಈ ಪ್ರಶ್ನೆಯನ್ನು ಕೇಳಿರಿ, ‘ಇಸ್ರೇಲ್ ಮಾಡಿದಂಥ ದುಷ್ಕೃತ್ಯಗಳನ್ನು ಬೇರೆ ಯಾರಾದರೂ ಮಾಡಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ?’ ಇಸ್ರೇಲ್ ದೇಶವು ದೇವರ ವಧುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:13
14 ತಿಳಿವುಗಳ ಹೋಲಿಕೆ  

“ಭಯಂಕರವಾದ ಮತ್ತು ಆಶ್ಚರ್ಯವಾದ ಕಾರ್ಯವು ದೇಶದಲ್ಲಿ ನಡೆಯುತ್ತದೆ.


ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯೀಮಿನ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಅಪವಿತ್ರವಾಗಿದೆ.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶ ಒಂದು ಹುಟ್ಟೀತೇ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೇ? ಆದರೂ ಪ್ರಸವವೇದನೆ ತೊಡಗಿದೊಡನೆ ಚೀಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.


ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.


ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.


ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮವು ತಪ್ಪುವುದೇ? ದೂರದಿಂದ ಇಳಿದು ಹರಿಯುವ ತಂಪಾದ ಪ್ರವಾಹದ ನೀರು ಬತ್ತುವುದೇ?


ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ:


“ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ. ಇನ್ನು ಮೇಲೆ ಎದ್ದೇಳುವುದೇ ಇಲ್ಲ. ಅವಳು ದಿಕ್ಕಿಲ್ಲದೆ ತನ್ನ ಭೂಮಿಯ ಮೇಲೆ ಒರಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು