Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:15 - ಕನ್ನಡ ಸಮಕಾಲಿಕ ಅನುವಾದ

15 ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:15
35 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.


ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ,


ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.


ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”


‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೂ, ನಿಮ್ಮ ಹೆಂಡತಿಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವೆವೆಂದೂ, ನಿಮ್ಮ ಬಾಯಿಗಳಿಂದ ಹೇಳಿ ನಿಮ್ಮ ಕೈಗಳಿಂದ ಸಹ ಈಡೇರಿಸಿದ್ದೀರಿ.’ “ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವಿರಿ.


ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.


ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.


ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,


ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮವು ತಪ್ಪುವುದೇ? ದೂರದಿಂದ ಇಳಿದು ಹರಿಯುವ ತಂಪಾದ ಪ್ರವಾಹದ ನೀರು ಬತ್ತುವುದೇ?


ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ; ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.


ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.


ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು.


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.


ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’


ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು