Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:16 - ಕನ್ನಡ ಸಮಕಾಲಿಕ ಅನುವಾದ

16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:16
35 ತಿಳಿವುಗಳ ಹೋಲಿಕೆ  

ನನ್ನನ್ನು ನೋಡುವವರೆಲ್ಲರೂ ನನ್ನನ್ನು ಗೇಲಿಮಾಡುತ್ತಾರೆ. ಅವರು ತಲೆ ಆಡಿಸುತ್ತಾ ಹೀಗೆ ಅವಮಾನಪಡಿಸುತ್ತಾರೆ:


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ,


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.


ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,


ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.


ನಿನ್ನ ದೇಶದ ಜನರಿಗೆ ಹೀಗೆ ಹೇಳು, ‘ಯೆರೂಸಲೇಮಿನ ನಿವಾಸಿಗಳಿಗೆ ಮತ್ತು ಇಸ್ರಾಯೇಲರ ದೇಶಕ್ಕೆ ಸಾರ್ವಭೌಮ ಯೆಹೋವ ದೇವರು ಹೇಳಿದ್ದೇನೆಂದರೆ, ಅವರು ತಮ್ಮ ರೊಟ್ಟಿಯನ್ನು ಎಚ್ಚರಿಕೆಯಿಂದಲೇ ತಿನ್ನುವರು, ನೀರನ್ನು ಅಂಜಿಕೆಯಿಂದಲೇ ಕುಡಿಯುವರು. ಅದರಲ್ಲಿ ವಾಸವಾಗಿರುವವರೆಲ್ಲರ ಹಿಂಸಾಚಾರದಿಂದ ಅವರ ದೇಶವು ಸೊತ್ತನ್ನೆಲ್ಲಾ ಕಳೆದುಕೊಂಡು ಹಾಳಾಗುವುದು.


ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಯೆಹೋವ ದೇವರು ನಿಮಗೂ ನಿಮ್ಮ ಸಂತತಿಗೂ ಭಯಂಕರವಾದ ಉಪದ್ರವಗಳನ್ನು ಬರಮಾಡುವರು; ಅವು ಕಠಿಣವಾದ ಮತ್ತು ದೀರ್ಘಕಾಲದ ಬಾಧೆಗಳೂ ಘೋರವಾದ ಮತ್ತು ಗಂಭೀರವಾದ ರೋಗಗಳಾಗಿರುವವು.


ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ.


ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.


ನಾನು ನನ್ನ ದೂರುಗಾರರಿಗೆ ನಿಂದೆಯಾಗಿದ್ದೇನೆ; ಅವರು ನನ್ನನ್ನು ಕಂಡು ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ಏಕೆಂದರೆ ನೀನು ಅದರ ವಿಷಯ ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ.


“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.


ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.’ ”


ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ.


ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.


ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು