Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:11 - ಕನ್ನಡ ಸಮಕಾಲಿಕ ಅನುವಾದ

11 ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:11
13 ತಿಳಿವುಗಳ ಹೋಲಿಕೆ  

ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”


ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.”


ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!


ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ, ‘ಅವರು ಕಬ್ಬಿಣದ ಕೋಲಿನಿಂದ ರಾಷ್ಟ್ರಗಳನ್ನು ಆಳುವರು. ಮಣ್ಣಿನ ಮಡಿಕೆಗಳು ಒಡೆಯುವಂತೆ ಬಲ ಮುರಿದು ಹೋಗುವುದು.’


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.


ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.


ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.


ನೀನು ಈ ಗ್ರಂಥವನ್ನು ಓದಿ ಮುಗಿಸಿದ ಮೇಲೆ, ಅದಕ್ಕೆ ಕಲ್ಲು ಕಟ್ಟಿ, ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ,


ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು