Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:30 - ಕನ್ನಡ ಸಮಕಾಲಿಕ ಅನುವಾದ

30 “ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:30
30 ತಿಳಿವುಗಳ ಹೋಲಿಕೆ  

“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.


“ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು, ‘ದೇವರ ರೌದ್ರದ ದಿವಸದಲ್ಲಿ ನೀನು ಶುದ್ಧಿಯಾಗದ ದೇಶವಾಗಿಯೂ, ಮಳೆಯಿಲ್ಲದ ದೇಶವಾಗಿಯೂ ಇರುವೆ.’


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು