Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:37 - ಕನ್ನಡ ಸಮಕಾಲಿಕ ಅನುವಾದ

37 ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅಲ್ಲಿಂದಲೂ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವಿ; ಏಕಂದರೆ ನಿನ್ನ ಭರವಸಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಸಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:37
16 ತಿಳಿವುಗಳ ಹೋಲಿಕೆ  

ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರಿಸುವವರೆಗೂ ಅವನು ಅಲ್ಲಿಯೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಯೆಹೋವ ದೇವರ ನುಡಿ,’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.


ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ.


ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”


ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.


ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


“ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.


ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು