Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:7 - ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:7
28 ತಿಳಿವುಗಳ ಹೋಲಿಕೆ  

ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ.


“ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.


ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.


“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.


ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.


ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.


ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.


ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.


ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ.


“ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.


ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು