Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:8 - ಕನ್ನಡ ಸಮಕಾಲಿಕ ಅನುವಾದ

8 ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:8
35 ತಿಳಿವುಗಳ ಹೋಲಿಕೆ  

“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.


ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.


ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.


“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.


ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ತಮಗೆ ಪ್ರಯೋಜನವಾಗದೆ ಸಹಾಯಕ್ಕೂ, ಪ್ರಯೋಜನಕ್ಕೂ ಅಲ್ಲ. ನಿಂದೆಗೂ, ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ಸೃಷ್ಟಿಕರ್ತರಾದ ದೇವರು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು