Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:3 - ಕನ್ನಡ ಸಮಕಾಲಿಕ ಅನುವಾದ

3 ಮಾರನೆ ದಿವಸದಲ್ಲಿ, ಪಷ್ಹೂರನು ಯೆರೆಮೀಯನನ್ನು ಬಂಧನದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ, “ಯೆಹೋವ ದೇವರು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ ಮಾಗೋರ್ ಮಿಸ್ಸಾಬೀಬ್ ಎಂದು ಕರೆಯುತ್ತಾರೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮರುದಿನ ಆ ಪಷ್ಹೂರನು ಯೆರೆಮೀಯನನ್ನು ಸೆರೆಯಿಂದ ಬಿಡಿಸಿದಾಗ ಯೆರೆಮೀಯ ಅವನಿಗೆ ಹೀಗೆಂದು ಹೇಳಿದನು: “ಸರ್ವೇಶ್ವರ ನಿನ್ನ ಹೆಸರನ್ನು ಪಷ್ಹೂರ್ ಎಂದು ಕರೆಯದೆ ‘ಮಾಗೋರ್ ಮಿಸ್ಸಾಬೀಬ್’ ಎಂದು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು - ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ವಿುಸ್ಸಾಬೀಬ್ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಹೂರನಿಗೆ ಹೀಗೆ ಹೇಳಿದನು: “ದೇವರು ನಿನ್ನನ್ನು ಪಷ್ಹೂರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, ‘ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:3
18 ತಿಳಿವುಗಳ ಹೋಲಿಕೆ  

ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.


ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.


ಹೊಲಕ್ಕೆ ಹೋಗಬೇಡ; ದಾರಿಯಲ್ಲಿ ನಡೆಯಬೇಡ. ಏಕೆಂದರೆ ಶತ್ರುವಿನ ಖಡ್ಗವೂ, ಅಂಜಿಕೆಯೂ ಸುತ್ತಲೂ ಇವೆ.


ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು.


ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.


ಆಗ ಯಾಜಕನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆಮೀಯನಿಗೆ ಓದಿ ಹೇಳಿದನು.


ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು.


ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’


ಇನ್ನು ಮುಂದೆ, ‘ಅಬ್ರಾಮ್’ ಎಂದು ನಿನಗೆ ಹೆಸರಿರುವುದಿಲ್ಲ. ನಿನ್ನ ಹೆಸರು, ‘ಅಬ್ರಹಾಮ’ ಎಂದು ಇರುವುದು. ಏಕೆಂದರೆ ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ.


ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು